ಜನ ಮನದ ನಾಡಿ ಮಿಡಿತ

Advertisement

ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ನೇಣಿಗೆ ಶರಣು

ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.
ಉಡುಪಿಯ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಯ ವಸತಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.


ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್‌ ಮೂಲದಿಂದ ತಿಳಿದುಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!