ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪು ತೋಟದ ನಿವಾಸಿ ಜಲೀಲ್ (49) ಎಂಬವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಜಲೀಲ್ ಅ.12ರ ಶನಿವಾರ ಬೆಳಿಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ ಚಪ್ಪಲಿ ಮಲ್ಪೆ ಪಡುಕರೆ ಸೇತುವೆ ಬಳಿ ಪತ್ತೆಯಾಗಿತ್ತು. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡವು ಜಲೀಲ್ ನಾಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶವನ್ನು ಬಿತ್ತರಿಸಿತ್ತು. ಬೆಳಿಗ್ಗೆ ಸುಮಾರು 7 ಗಂಟೆಗೆ ಪಡುಕರೆ ಬಾಪುತೋಟ ಸಮೀಪದ ಪಾಪನಾಶಿನಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರು ಮೃತದೇಹದ ಹುಡುಕಾಟಕ್ಕೆ ಈಶ್ವರ್ ಮಲ್ಪೆ ಮತ್ತು ತಂಡದ ಜೊತೆಗೆ ಸಹಕಾರ ನೀಡಿದ್ದರು. ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ತಮ್ಮ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!