ಜನ ಮನದ ನಾಡಿ ಮಿಡಿತ

Advertisement

ಮಲ್ಪೆ: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ..!!

 ಅಪ್ರಾಪ್ತ ಪ್ರಾಯದ ಇರ್ವರು ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ. ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.

 

ಬೀಚಿನಲ್ಲಿ ವಿಹರಿಸುತ್ತಿದ್ದ ಇರ್ವರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಅವರಿಗೆ, ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.

ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಕಾನ್ಸ್ಟೇಬಲ್ ಮಹದೇವ್ ಅವರೊಂದಿಗೆ ಒಳಕಾಡುವರು ಬೀಚಿಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ. ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!