ಜನ ಮನದ ನಾಡಿ ಮಿಡಿತ

Advertisement

“ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು”- ಅನ್ನಪೂರ್ಣ ರಿತೇಶ್

ಮುಲ್ಕಿ: ವಿದ್ಯೆ ನಮ್ಮನ್ನು ಬಾಹ್ಯವಾಗಿ ರೂಪಿಸಿ ಬದುಕನ್ನು ನೀಡುತ್ತದೆ. ಕಲೆ ನಮ್ಮ ಅಂತಃ ರಂಗವನ್ನು ಪ್ರಚೋದಿಸಿ ಹೃದಯವನ್ನು ಅರಳಿಸುತ್ತದೆ. ಬಾಹ್ಯ ಹಾಗೂ ಅಂತಃ ರಂಗದ ವೃದ್ಧಿಯಿಂದ ಜೀವನ ಸಮೃದ್ಧವಾಗುತ್ತದೆ ಹಾಗೂ ಪ್ರಬುದ್ಧವಾಗುತ್ತದೆ. ಆ ಕಡೆಗೆ ಸಾಗುವ ಮನಸ್ಸು ವಿದ್ಯಾರ್ಥಿಗಳಿಗೆ ಆಗಲಿ, ಶಿಕ್ಷಣ ಮತ್ತು ನೃತ್ಯಕಲೆಯಿಂದ ಇದು ಸಾಧ್ಯವಾಗಲಿದೆ, ಜೀವನದ ಪರಿಪೂರ್ಣತೆಗಾಗಿ ನೃತ್ಯಕಲೆ ಪೂರಕವಾಗಬಲ್ಲದು ಎಂದು ಕಿನ್ನಿಗೋಳಿಯ ಶಿವಪ್ರಣಾಮ್ ನೃತ್ಯ ಸಂಸ್ಥೆಯ ನಿರ್ದೇಶಕರಾದ ಅನ್ನಪೂರ್ಣ ರಿತೇಶ್ ಶುಭ ಹಾರೈಸಿದರು.
ಇವರು ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆದ ಈ ಶೈಕ್ಷಣಿಕ ವರ್ಷದ ಉಚಿತ ನೃತ್ಯ ತರಗತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಶಾರದಾ ಸೊಸೈಟಿಯ ಅಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೃತ್ಯಕಲೆ ನಮ್ಮ ಹೃದಯದ ಭಾಷೆ. ಈ ಕಲೆಯಲ್ಲಿ ಎಲ್ಲಾ ಶಿಕ್ಷಣವೂ ಇದೆ. ಹಾಗಾಗಿ ಶಿಕ್ಷಣದಲ್ಲಿ ನೃತ್ಯಕಲೆ ಇರಲೇಬೇಕು. ಇದರಿಂದ ಹೃದಯವಂತ ಸುಸಂಸ್ಕೃತ ವ್ಯಕ್ತಿಗಳ ನಿರ್ಮಾಣ ಸಾಧ್ಯವಾಗಿ ಮಾನವರಾಗಿ ಈ ಸಮಾಜದಲ್ಲಿ ಬದುಕಬಹುದು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಭುವನಾಭಿರಾಮ ಉಡುಪ, ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು, ನೃತ್ಯ ತರಬೇತುದಾರರಾದ ಸುಧಾಕರ್ ಸುರತ್ಕಲ್ ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಸ್ವಾಗತಿಸಿದರು ಸಹ ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ದೀಪಿಕಾ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!