ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ

ಬಂಟ್ವಾಳ: ಅ.21 ರಂದು ಸೋಮವಾರ ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಬಂಟ್ವಾಳ ತಾಲೂಕಿನ ಮೊಡಂಕಾಪು ಶಾಲೆಯಲ್ಲಿ ಮಸ್ಟರಿಂಗ್ ( ಪೂರ್ವತಯಾರಿ) ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಮೊಡಂಕಾಪು ಮಸ್ಟರಿಂಗ್ ನಡೆಯುವ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ,ಬಳಿಕ ತಾಲೂಕು ತಹಶಿಲ್ದಾರ್ ಅರ್ಚನಾ ಭಟ್ ಅವರಲ್ಲಿ ತಯಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ, ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ರಾಮಕೃಷ್ಣ, ಹರೀಶ್, ಸುತೇಶ್, ಸಂಜೀವ,ಉಪತಹಶೀಲ್ದಾರ್ ಗಳಾದ ನವೀನ್ ಬೆಂಜನಪದವು, ನರೇಂದ್ರ ಭಟ್, ಕಂದಾಯ ನಿರೀಕ್ಷಕ ಜನಾರ್ಧನ,ವಿಜಯ್, ಪ್ರಶಾಂತ್ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

ಮತದಾನ ಎಲ್ಲಿ, ಮತದಾರರೆಷ್ಟು?
ಬಂಟ್ವಾಳ ತಾಲೂಕಿನಲ್ಲಿ ಒಟ್ಟು 795 ಮತದಾರರಿದ್ದು,ಅದರಲ್ಲಿ 381 ಗಂಡು,414 ಹೆಣ್ಣು ಮತದಾರರಿದ್ದಾರೆ. 51 ಗ್ರಾಮಪಂಚಾಯತ್ ಗಳಲ್ಲಿ , ಒಂದು ಪುರಸಭೆ ( ಬಂಟ್ವಾಳ) ಒಂದು ಪಟ್ಟಣಪಂಚಾಯತ್ (ವಿಟ್ಲ) ಹೀಗೆ ಒಟ್ಟು 53 ಕೇಂದ್ರಗಳಲ್ಲಿ ನಾಳೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡು ಸಂಜೆ 4 ರ ತನಕ‌ ಮತದಾನ ನಡೆಯಲಿದೆ.
53 ಕಡೆಗಳಲ್ಲಿ ನಡೆಯುವ ಮತದಾನ ಕೇಂದ್ರಗಳಿಗೆ ಒಟ್ಟು 6 ಸೆಕ್ಟರ್ ಅಧಿಕಾರಿಗಳನ್ನು 53 ಪಿ.ಆರ್.ಒ, 53 ಎಪಿಆರ್ ಒ, 53 ಪಿ.ಒ ಅಧಿಕಾರಿಗಳನ್ನು ಹಾಗೂ 53 ಡಿ.ಗ್ರೂಪ್ ನೌಕರರು ಸೇರಿದಂತೆ ಒಟ್ಟು 216 ಸಿಬ್ಬಂದಿಗಳನ್ನು ಮತ್ತು 5 ಮೈಕ್ರೋ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶಿಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ನಾಳೆ ಸಂಜೆ ಇದೇ ಶಾಲೆಯಲ್ಲಿ 4.30 ರಿಂದ ಡಿ.ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!