ಜನ ಮನದ ನಾಡಿ ಮಿಡಿತ

Advertisement

ಕಿಚ್ಚನ ನಿಲುವಿಗೆ ಚೈತ್ರ ಕುಂದಾಪುರ ಅಪಸ್ವರ?! – BIGGBOSS

ಕನ್ನಡ ಬಿಗ್ ಬಾಸ್ ಕಳೆದ ಸೀಸನ್​ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಈಗ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದಕ್ಕೆ ಕಾರಣ ಆಗಿದ್ದು ಆ ವಾರ ಪೂರ್ತಿ ನಡೆದ ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸಿಕೊಂಡು ಮಾಡಿದ ಜಗಳ. ಎಲ್ಲರೂ ಜಗದೀಶ್​ನ ವಿರುದ್ಧ ಮಾತನಾಡಿದ್ದರಿಂದಲೇ ಅವರು ಪ್ರವೋಕ್ ಆದರು ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ. ಇದೇ ವಿಚಾರವನ್ನು ಸುದೀಪ್ ಅವರು ಮಾತನಾಡಿದ್ದಾರೆ. ಇದಕ್ಕೆ ಚೈತ್ರಾ ಕುಂದಾಪುರ ಖಂಡನೆ ವ್ಯಕ್ತಪಡಿಸಿದ್ದಾರೆ.

ಸುದೀಪ್ ಅವರು ವೀಕೆಂಡ್​ನಲ್ಲಿ ಜಗದೀಶ್ ಅವರ ಪರವಾಗಿ ಮಾತನಾಡಿದರು. ಜಗದೀಶ್ ಹೇಳಿದ್ದು ಸರಿ ಅಲ್ಲ ಎಂದು ಹೇಳಿದ ಸುದೀಪ್​, ಎಲ್ಲರೂ ಅವರನ್ನು ತಡೆಯಬಹುದಿತ್ತು ಎನ್ನುವ ಅಭಿಪ್ರಾಯ ಹೊರಹಾಕಿದ್ದರು. ಈ ಬಗ್ಗೆ ಎಲ್ಲರಿಗೂ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನು ಮನೆ ಮಂದಿ ಖಂಡಿಸಿದ್ದಾರೆ.

ಈ ಬಗ್ಗೆ ಚೈತ್ರಾ ಮಾತನಾಡಿದ್ದಾರೆ. ‘ನೀನು ನನಗೆ ಕೆಸರು ಎರಚಿದರೆ ನಾನು ಕೂಡ ಕೆಸರನ್ನೇ ಎರಚೋದು. ಆ ವ್ಯಕ್ತಿಗೆ ನಾನು ಗುಲಾಬಿ ಎಸೆಯೋಕಾಗಲ್ಲ. ಆ ವ್ಯಕ್ತಿ ಬಗ್ಗೆ ನನಗೇಕೆ ಅಷ್ಟು ಕ್ಲ್ಯಾರಿಟಿ ಕೊಡ್ತಾರೆ? ಸುದೀಪ್ ಸ್ಪರ್ಧಿಗಳಿಗೆ ಬೈದರು ಅನ್ನೋದನ್ನು ಮಾತ್ರ ಜನರು ನೆನಪಿಟ್ಟುಕೊಳ್ಳುತ್ತಾರೆ. ಮಧ್ಯ ಮಧ್ಯದಲ್ಲಿ ಸೇರಿಸಿದ ಲೈನ್​ನ ಜನರು ನೆನಪಿಟ್ಟುಕೊಳ್ಳಲ್ಲ’ ಎಂದಿದ್ದಾರೆ.

‘ಕೈ ಮುಗಿದು ಪೂಜೆ ಮಾಡುವ ಕಲ್ಲಿಗೂ, ಎಲ್ಲೋ ಬಿದ್ದ ಕಲ್ಲಿಗೂ ವ್ಯತ್ಯಾಸ ಇರುತ್ತದೆ. ರೋಡ್​ನಲ್ಲಿರೋ ಕಲ್ಲಿಗೆ ಉಗಿದೆ ಎಂದ ಮಾತ್ರಕ್ಕೆ ನಾನು ತಪ್ಪಿತಸ್ಥೆ ಆಗಲ್ಲ. ನನ್ನ ಮಾತನ್ನು ಕಂಪ್ಲೀಟ್ ಮಾಡೋಕೆ ಬಿಡಬೇಕು. ಇಡೀ ಮನೆಯನ್ನು ವಿಲನ್ ಮಾಡಿದ್ದಾರೆ. ಅವರು ವಿಚಾರದಲ್ಲಿ ನೀವು ಮಾಡಿದ್ದು ತಪ್ಪು ಅಂದಿದ್ದಾರೆ. ಅದು ಸರಿ ಅಲ್ಲ’ ಎಂದಿದ್ದಾರೆ ಚೈತ್ರಾ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!