ಜನ ಮನದ ನಾಡಿ ಮಿಡಿತ

Advertisement

ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಥ್ಲೆಟಿಕ್ಸ್ ಕೂಟ ಎಲ್‌ಐಸಿ ತಂಡ ಚಾಂಪಿಯನ್‌

ಮೂಡುಬಿದಿರೆ : ಉತ್ತರಾಖಂಡ್‌ ರಾಜಧಾನಿ ಡೆಹ್ರಾಡೂನ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತ ಸರ್ಕಾರಿ ಸ್ವಾಮ್ಯದ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಕ್ರೀಡಾಕೂಟದಲ್ಲಿ ಎಲ್‌ಐಸಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ತಂಡದ ಸದಸ್ಯೆ, ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿನಿ ಶಿರ್ತಾಡಿಯ ಜಾಯ್ಲಿನ್ ಲೋಬೊ ಅವರು ಲಾಂಗ್ ಜಂಪ್‌ ಮತ್ತು ಟ್ರಿಬ್ಬಲ್ ಜಂಪ್ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮೂಲಕ ಚಿನ್ನದ ಪದಕ ಹಾಗೂ 4×100 ಮತ್ತು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ ಗಳಿಸಿ ಗಮನ ಸೆಳೆದರು. ಹೈಜಂಪ್‌ನಲ್ಲಿ ಸುಪ್ರೀತ್ ರಾಜ್ ಗೆ ಚಿನ್ನ, ಜಾವೆಲಿನ್‌ ಮತ್ತು ಶಾಟ್‌ಪುಟ್‌ ಕ್ರೀಡೆಯಲ್ಲಿ ಶಹೆಜಹಾನಿ ರವರು ಚಿನ್ನದ ಪದಕ ಮತ್ತು 4×100 ರಿಲೇ ಓಟದಲ್ಲಿ ಬೆಳ್ಳಿ ಪದಕ ಗೆದ್ದ ಹಿರಿಮೆಗೆ ಪಾತ್ರರಾದರು.

ಇತರ ಕ್ರೀಡಾಪಟುಗಳಾದ ಹರ್ಷಿಣಿ ಅವರು ಹೈಜಂಪ್‌ನಲ್ಲಿ ಚಿನ್ನ, ಟ್ರಿಪ್ಪಲ್ ಜಂಪ್ ಹಾಗು 4×400 ರಿಲೇ ಓಟದಲ್ಲಿ ಬೆಳ್ಳಿ ಪದಕ‌ವನ್ನು ಗೆಲ್ಲುವ ಮೂಲಕ ತಂಡದ ಸಾಧನೆಗೆ ಗಣನೀಯ ಕೊಡುಗೆ ನೀಡಿದರು. ಈ ಮೂಲಕ ಎಲ್ ಐಸಿ ತಂಡ ಐದು ವಿಭಾಗಳಲ್ಲಿ ಚಾಂಪಿಯನ್ ಅಗಿ ಹೊರಹೊಮ್ಮಿತು.

ಎಲ್ ಐ ಸಿ ತಂಡವು ಪುರುಷರ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗುವುದರ ಜೊತೆಗೆ ಪುರುಷರ ಫೀಲ್ಡ್ ಮತ್ತು ಟ್ರಾಕ್ ಚಾಂಪಿಯನ್, ಮಹಿಳಾ ಫೀಲ್ಡ್ ಚಾಂಪಿಯನ್ ಪ್ರಶಸ್ತಿಗೂ ಪಾತ್ರವಾಯಿತು.

ಕ್ರೀಡಾಕೂಟದಲ್ಲಿ ಗಣನೀಯ ಸಾಧನೆ ಮಾಡಿದ ತಂಡದ ಸದಸ್ಯರಿಗೆ ಎಲ್‌ಐಸಿ ಸಂಸ್ಥೆಯು ಅಭಿನಂದಿಸಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!