ಜನ ಮನದ ನಾಡಿ ಮಿಡಿತ

Advertisement

ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳ ಸಾಗಾಟ: ಪ್ರಕರಣ ದಾಖಲು..!

ಮಂಗಳೂರಿನ ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

 


ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ. ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!