ಜನ ಮನದ ನಾಡಿ ಮಿಡಿತ

Advertisement

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.

ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಮಾತನಾಡಿ, ಒಂಬತ್ತು ವರ್ಷಗಳಲ್ಲಿ ಯಕ್ಷಗಾನ ಕಲಾವಿದರಿಗೆ ಸುಮಾರು 13 ಕೋಟಿ ವೆಚ್ಚದಲ್ಲಿ ವಿವಿಧ ರೀತಿಯಲ್ಲಿ ನೆರವು ನೀಡಲಾಗಿದ್ದು, ದಾನಿಗಳ ನೆರವಿನಿಂದ ಮುಂದಿನ ಒಂದೂವರೆ ವರ್ಷದಲ್ಲಿ 100 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.
ಬೆಂಗಳೂರಿನ ಉದ್ಯಮಿ ಆರ್. ಕೆ.ಭಟ್, ಬಂಟ್ವಾಳ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ, ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡ ಮಾತನಾಡಿದರು.
ಕಲಾವಿದ ಚಂದ್ರಶೇಖರ ಸರಪಾಡಿ ದಂಪತಿ, ಪೋಷಕರಾದ ಗಂಗಯ್ಯ ನಾಯ್, ಪ್ರೇಮಾ, ಉಮೇಶ್ ಮಠದಬೆಟ್ಟು ಭಾಗವಹಿಸಿದ್ದರು.
ಸರಪಾಡಿ ಘಟಕದ ಸಂಚಾಲಕ ಸರಪಾಡಿ ಅಶೋಕ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶು ಧನಂಜಯ ಶೆಟ್ಟಿ ನಾಡಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!