ಕಾರ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಇವರನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಆದೇಶವನ್ನು ನೀಡಿದ್ದಾರೆ

ಈ ಹಿಂದೆ ಅದ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸದಾಶಿವ ದೇವಾಡಿಗ ರವರ ಅವಧಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ನೂತನ ಅದ್ಯಕ್ಷರ ಆಯ್ಕೆ ನಡೆದಿದೆ.ಅದ್ಯಕ್ಷ ಸ್ಥಾನಕ್ಕೆ ಅಯ್ಕೆಯ ಬಗ್ಗೆ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿಯವರು ಸಮ್ಮುಖದಲ್ಲಿ ಪಕ್ಷದ ಮುಖಂಡರು ಹಾಗೂ ವಿವಿದ ಘಟಕದ ಪಧಾದಿಕಾರಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿತ್ತು.
ಶುಭದರಾವ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದು ಪ್ರಸ್ತುತ ಬ್ಲಾಕ್ ಕಾಂಗ್ರೇಸ್ ವಕ್ತಾರರಾಗಿ, ಹಾಗೂ ಕಾರ್ಕಳ ಪುರಸಭೆಯ ಸದಸ್ಯರಾಗಿ ಸತತ ಮೂರನೇ ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.



