ಜನ ಮನದ ನಾಡಿ ಮಿಡಿತ

Advertisement

ನರಿಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಟೈಲರಿಂಗ್ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ

ದಿನಾಂಕ. 29.10.2024ರಂದು ನರಿಮೊಗರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ ) ಮಂಗಳೂರು.(ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) . ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ . ಎನ್ ಆರ್ ಎಲ್ ಎಂ ತಾಲೂಕು ಅಭಿಯಾನ ನಿರ್ವಹಣಾ ಘಟಕ ಪುತ್ತೂರು, ಗ್ರಾಮ ಪಂಚಾಯತ್ ನರಿಮೊಗರು ಮತ್ತು ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀಮತಿ ಹರಿಣಿ ವಹಿಸಿ ಶುಭ ಹಾರೈಸಿದರು.

ಕಾರ್ಯ ಗಾರದ ಬಗ್ಗೆ ಪ್ರಾಸ್ತಾವಿಕ ನುಡಿ ಶ್ರೀ ವಿಶ್ವನಾಥ ಶೆಟ್ಟಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ನೆರವೇರಿಸಿ ಎಲ್ಲಾ ಶಿಬಿರಾರ್ಥಿಗಳು ಸ್ವ ಉದ್ಯೋಗ ಮಾಡಬೇಕು ಎಂದು ಹಿತನುಡಿದರು. ಮುಖ್ಯ ಅತಿಥಿಗಳಾಗಿ ಶ್ರೀ ಜೀವನ್ ಕೊಲ್ಯ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಮಾತನಾಡುತ್ತಾ ಕಾರ್ಯ ಗಾರದ ನಿಯಮ .ಯೋಜನೆ.ಹಾಗೂ ಸ್ವ ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಹಾಗು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಕಾರ್ಯ ಕ್ರಮ ಗಳ ಬಗ್ಗೆ ವಿವರಿಸಿದರು. . ಮುಖ್ಯ ಅತಿಥಿಗಳಾಗಿ ರವಿಚಂದ್ರ ಯು ಪಂಚಾಯತ ಅಭಿವೃದ್ಧಿ ಅಧಿಕಾರಿ ಗ್ರಾಮ ಪಂಚಾಯತ್ ನರಿಮೊಗ್ರು ಕಾರ್ಯಕ್ರಮದ ಬಗ್ಗೆ, ಸಂಜೀವಿನಿ ಯೋಜನೆಯ ಬಗ್ಗೆ ವಿವರವಾಗಿ ತಿಳಿಸಿದರು ಶ್ರೀ ಸುಧಾಕರ ಕುಲಾಲ್ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯರು ಶುಭಾಶಯ ಕೋರಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು.

ಶ್ರೀ ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಅದ್ಯಕ್ಷರು ಶ್ರೀ ಮತಿ ಪೂರ್ಣಿಮ, ತರಬೇತುದಾರರಾದ ಶ್ರೀ ಮತಿ ಪ್ರೀತಿ ಆಚಾರ್ಯ, ಶ್ರೀಮತಿ ನಳಿನಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮತಿ ಸುನೀತಾ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಇವರು ನೆರವೇರಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಅನುರಾಧ ಪ್ರಭು ಸ್ವಾಗತಿಸಿದರು .ವಂದನಾರ್ಪಣೆ ಯನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಬೇಬಿ ಇವರು ನೆರವೇರಿಸಿದರು. ಕಾರ್ಯ ಕ್ರಮ ದಲ್ಲಿ ಸಂಜೀವಿನಿ ಸದಸ್ಯರು . ಒಕ್ಕೂಟದ ಎಲ್ಲಾ ಪದಾಧಿಕಾರಿಯವರು .ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

error: Content is protected !!