ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.



