ಜನ ಮನದ ನಾಡಿ ಮಿಡಿತ

Advertisement

ಕೇರಳ ಪ್ರೊಫೆಸರ್ ಕೈಕತ್ತರಿಸಿದ ಪ್ರಕರಣ : ಆರು ಮಂದಿ ದೋಷಿ; ಎನ್ ಐಎ ಕೋರ್ಟ್ ತೀರ್ಪು

ತಿರುವನಂತಪುರಂ : ಕೇರಳದ ಪ್ರೊಫೆಸರ್ ಒಬ್ಬರ ಕೈ ಕತ್ತರಿಸಿದ್ದ 2010ರ ಪ್ರಕರಣಕ್ಕೆ ಸಂಬಂಧಿಸಿ ಕೊಚ್ಚಿ ಎನ್ ಐಎ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರು ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಲಾಗಿದೆ. ಪ್ರವಾದಿ ಮುಹಮ್ಮದರನ್ನು ಅವಮಾನಿಸಿದ್ದರೆಂದು ಪ್ರೊಫೆಸರ್ ಟಿ.ಜೆ. ಜೋಸೆಫ್ ರ ಕೈಕತ್ತರಿಸಿದ್ದ ಪ್ರಕರಣ ದ ತೀರ್ಪು ಇದೀಗ ಹೊರಬಿದ್ದಿದೆ.
ಕೇರಳದ ಪ್ರೊಫೆಸರ್ ಟಿ.ಜೆ. ಜೋಸೆಫ್ ಎಂಬವರ ಕೈಕತ್ತರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹಂತದ ವಿಚಾರಣೆಯ ಬಳಿಕ ಎನ್ ಐಎ ನ್ಯಾಯಾಧೀಶ ಅನಿಲ್ ಭಾಸ್ಕರ್ ಈ ತೀರ್ಪು ನೀಡಿದ್ದಾರೆ. ಪ್ರಶ್ನೆ ಪತ್ರಿಕೆಯೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನ ಮಾಡಿದ್ದಾರೆಂದು ಈ ದಾಳಿ ನಡೆಸಲಾಗಿತ್ತು. ಮೊದಲ ಹಂತದ ವಿಚಾರಣೆಯ 2015ರ ತೀರ್ಪಿನಲ್ಲಿ 13 ಮಂದಿಯನ್ನು ದೋಷಿಗಳನ್ನಾಗಿ ಗುರುತಿಸಲಾಗಿತ್ತು. ಇದೀಗ ಎರಡನೇ ಹಂತದ ವಿಚಾರಣೆಯ ತೀರ್ಪಿನಲ್ಲಿ ಆರು ಮಂದಿಯನ್ನು ದೋಷಿಗಳೆಂದು ಗುರುತಿಸಲಾಗಿದೆ. ಪ್ರೊಫೆಸರ್ ಕೈ ಕತ್ತರಿಸಿದ್ದ ಪ್ರಕರಣದ ಪ್ರಥಮ ಆರೋಪಿ ಸವಾದ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರೆಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!