ಜನ ಮನದ ನಾಡಿ ಮಿಡಿತ

Advertisement

ಟೂರಿಸ್ಟ್ ವ್ಯಾನ್ ಚಾಲಕ ಮಾಲಕರಿಗೆ ಆಗುವ ತೊಂದರೆಯನ್ನು ತಪ್ಪಿಸುವಂತೆ ಬಂಟ್ವಾಳ ಆರ್‌ಟಿಒ ಗೆ ಮನವಿ

ರೂಟ್ ಪರ್ಮಿಟ್ ಬಸ್ಸುಗಳು ಮತ್ತು ಶಾಲಾ ಬಸ್ಸುಗಳು ಅನಧಿಕೃತವಾಗಿ ಬಾಡಿಗೆ ಮಾಡುತ್ತಿರುದನ್ನು ನಿಲ್ಲಿಸಿ ಟೂರಿಸ್ಟ್ ವ್ಯಾನ್ ಚಾಲಕ ಮಾಲಕರಿಗೆ ಆಗುವ ತೊಂದರೆಯನ್ನು ತಪ್ಪಿಸುವಂತೆ ಬಂಟ್ವಾಳದ ಟೂರಿಸ್ಟ್ ವ್ಯಾನ್ ಚಾಲಕ- ಮಾಲಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಸದಾನಂದ ಹಳೆಗೇಟು ಅವರ ನೇತ್ರತ್ವದಲ್ಲಿ ಬಂಟ್ವಾಳ ಆರ್‌ಟಿಒ ಗೆ ಮನವಿ ನೀಡಲಾಯಿತು.

ಬಂಟ್ವಾಳ ತಾಲೂಕಿನಲ್ಲಿ ಸುಮಾರು 80ಕ್ಕೂ ಹೆಚ್ಚು ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಟೆಂಪೋ ಟ್ರಾವೆಲ್ಸ್, ವಾಹನಗಳು ಇದ್ದು ಮಿನಿ ಬಸ್ ಒಂದಕ್ಕೆ 60.000 ದಿಂದ ಟೆಂಪೋ ಟ್ರಾವೆಲರ್ ಗೆ 23000 ವರೆಗೆ ವಾರ್ಷಿಕ ತೆರಿಗೆಯನ್ನು ಟೂರಿಸ್ಟ್ ಪರ್ಮಿಟ್ ಆಧಾರದಲ್ಲಿ ಸರಕಾರಕ್ಕೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಈ ಟೂರಿಸ್ಟ್ ವಾಹನಗಳಿಗೆ ವಾರದಲ್ಲಿ ಒಂದು ಎರಡು ಬಾಡಿಗೆ ಆಗುತ್ತಿದ್ದು ತುಂಬಾ ಕಷ್ಟಕರ ಜೀವನವನ್ನು ಸಾಗಿಸುತ್ತೇವೆ.ಇತ್ತೀಚಿನ ದಿನಗಳಲ್ಲಿ ರೂಟ್ ಪರ್ಮಿಟ್ ಬಸ್ಸುಗಳು ಬಿಸಿ ರೋಡ್ ತೊಕ್ಕೊಟ್ಟು ಮಂಗಳೂರು, ಬಿಸಿ ರೋಡು ಕೈಕಂಬ ಕಟೀಲ್, ಬಿಸಿ ರೋಡು ಪಂಜಿಕಲ್ ವಾಮದಪದವು, ಬಿಸಿ ರೋಡು ಮೂಡಬಿದ್ರೆ, ಕುಕ್ಕಾಜೆ, ಮಂಚಿ, ಸಾಲೆತ್ತೂರ್ ಬಾಕ್ರಬೈಲ್ ಹಾಗೂ ಮಂಗಳೂರಿನ ಸಿಟಿ ಬಸ್ಸುಗಳು, ಮದುವೆ ಕಾರ್ಯಕ್ರಮದ ಬಾಡಿಗೆ ಬಂಟ್ವಾಳದ ಪರಿಸರದಲ್ಲಿ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದಾಗಿ ನಮ್ಮ ಟೂರಿಸ್ಟ್ ವಾಹನಗಳಿಗೆ ಬಾಡಿಗೆ ಇಲ್ಲದಂತಾಗಿದೆ. ಈ ರೂಟ್ ಬಸ್ಸುಗಳಿಗೆ ಸರಕಾರದಿಂದ ರಿಯಾಯಿತಿ ತೆರಿಗೆ ಇರುವುದರಿಂದ ಕಡಿಮೆ ಬಾಡಿಗೆಗೆ ಬರುತ್ತಿದೆ. ನಾವು ಟೂರಿಸ್ಟ್ ತೆರಿಗೆ ಕಟ್ಟಿಯು ನಮಗೆ ಬಾಡಿಗೆ ಇಲ್ಲದಂತೆ ಆಗಿದೆ

ಆದ್ದರಿಂದ ತಾವುಗಳು ನಮ್ಮ ಮನವಿಗೆ ಸ್ಪಂದಿಸಿ ಇಂತಹ ಬಸ್ಸುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಈ ಮೂಲಕ ಮನವಿಯನ್ನು ಮಾಡುತ್ತಿದ್ದೇವೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಕಾರ್ಯದರ್ಶಿ ಸುನಿಕ್ ,ಕೋಶಾಧಿಕಾರಿ ನಮೇಶ್ ಶೆಟ್ಟಿ, ಸದಸ್ಯರುಗಳಾದ ಚಂದ್ರಹಾಸ, ಸುಧಾಕರ ತುಂಬೆ, ಅಬ್ದುಲ್ಲಾ ಅಜಿಲಮೊಗರು, ಮ್ಯಾಕ್ಸಿಮ್‌ ಸಜೀಪ ಮತ್ತಿತರ ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!