ಜನ ಮನದ ನಾಡಿ ಮಿಡಿತ

Advertisement

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ

ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್‌ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ ಭಂಡಾರಿ ಹೇಳಿದರು.


ಅವರು ನ.7 ರಂದು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಜಲಜೀವನ್‌ ಮಿಷನ್‌ ಯೋಜನೆಯಡಿ ಐಇಸಿ/ಹೆಚ್‌.ಆರ್‌.ಡಿ ಚಟುವಟಿಕೆಗಳನ್ನು ನಡೆಸಲು ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಒಂದು ದಿನದ ಸಾಮರ್ಥ್ಯಾಭಿವೃದ್ಧಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ಮನೆಗೆ ಅಗತ್ಯ ಕುಡಿಯುವ ನೀರನ್ನು ಪೂರೈಸುವುದು ಹಾಗೂ ನಳ್ಳಿ ನೀರಿನ ಮಾಸಿಕ ಬಿಲ್ಲು ವಸೂಲಾತಿಯನ್ನು ಕಡ್ಡಾಯವಾಗಿ ನಿರ್ವಹಿಸುವ ಜವಾಬ್ದಾರಿ ಈ ಸಮಿತಿಯದ್ದಾಗಿದೆ ಎಂದು ತಿಳಿಸಿದರು.
ತಾ.ಪಂ. ಸಹಾಯಕ ನಿರ್ದೇಶಕರು (ಗ್ರಾ.ಉ.) ಶೈಲಜಾ ಎ ಇಲಾಖಾ ಮಾಹಿತಿಯನ್ನು ನೀಡಿದರು.
ಜಲಜೀವನ್‌ ಮಿಷನ್‌ ಜಿಲ್ಲಾ ಸಂಯೋಜಕರಾದ ಶಿವರಾಮ್‌, ಸುರೇಶ್‌, ಚರಣ್‌, ಅಶ್ವಿತ ತರಬೇತಿ ನೀಡಿದರು.
ಈ ಸಂದರ್ಭ ಬಲ್ನಾಡು ಗ್ರಾ.ಪಂ. ಅಧ್ಯಕ್ಷೆ ಪರಮೇಶ್ವರಿ, ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ, ಪಾಣಾಜೆ ಗ್ರಾ.ಪಂ. ಅಧ್ಯಕ್ಷೆ ಮೈಮೂನತ್ತುಲ್‌ ಮೆಹ್ರಾ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆಯ ಕಿರಿಯ ಅಭಿಯಂತರರ ಕುಶ ಕುಮಾರ್‌ ವೇದಿಕೆಯಲ್ಲಿದ್ದರು.
ತಾ.ಪಂ. ವಿಷಯ ನಿರ್ವಾಹಕರಾದ ಸುರೇಶ್‌ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!