ಜನ ಮನದ ನಾಡಿ ಮಿಡಿತ

Advertisement

ಮಂಗಳೂರು-ಪುಣೆ ನೇರ ವಿಮಾನ ಪುನರ್ ಆರಂಭಿಸುವಂತೆ ಶಾಸಕರಾದ ಡಿ.ವೇದವ್ಯಾಸ ಕಾಮತ್ ಮನವಿ

ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಶ್ರೀ ಮುರಳೀಧರ್ ಮೊಹೋಲ್ ರವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ನೇರ ವಿಮಾನಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.

ಮಂಗಳೂರು-ಪುಣೆ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕಾರು ಜನರ ಓಡಾಟವಿದೆ. ಹಾಗಾಗಿ ಈ ಹಿಂದಿದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಲಾಗಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!