ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆ ಆರೋಪಿ ಬಂಧನ

ಮುಲ್ಕಿ:ಮುಲ್ಕಿ ಪೊಲೀಸ್ ಠಾಣಾ ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಅತ್ತೂರು ನಿವಾಸಿ ಸುರೇಶ ಪೂಜಾರಿ(52 ) ಎಂಬಾತನನ್ನು ದಾವಣಗೆರೆ ಜಿಲ್ಲೆಯ ಸವಲಂಗ ಎಂಬಲ್ಲಿ ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ಮೂಡಬಿದ್ರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂದನ ವಿಧಿಸಿದೆ

ಆರೋಪಿ ಸುರೇಶ್ ಪೂಜಾರಿ ವಿವಿಧ ಕಳ್ಳತನ ಪ್ರಕರಣದಲ್ಲಿ ಶಾಮಿಲಾಗಿದ್ದು ಈತನ ಮೇಲೆ ಧರ್ಮಸ್ಥಳ ಠಾಣೆ, ಬೆಳ್ತಂಗಡಿ ಠಾಣೆ,ಉಡುಪಿ ನಗರ ಠಾಣೆ, ಹೆಬ್ರಿ ಠಾಣೆ,, ಶಿರ್ವ ಠಾಣೆ, ಹಿರಿಯಡ್ಕ ಠಾಣೆ, ಪಡುಬಿದ್ರೆ ಠಾಣೆ, ಕಾರ್ಕಳ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ ಹಾಗೂ ಮಹಾರಾಷ್ಟ್ರ ವಿವಿಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ವಿದ್ಯಾಧರ್ ಡಿ ಬೈಕೇರಿಕರ್ ಹಾಗೂ ಪೊಲೀಸ್ ಉಪ ನಿರೀಕ್ಷರಾದ ಅನಿತಾ ರವರ ಮಾರ್ಗದರ್ಶನದಲ್ಲಿ, ಠಾಣಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರಾದ ಉದಯ, ಜಯರಾಮ್ ಜೆ ರವರು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!