ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನವೆಂಬರ್ 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ”; ಆಮಂತ್ರಣ ಪತ್ರ ಬಿಡುಗಡೆ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.


ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!