ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಓಮ್ನಿ -ಕಾರು ಮಧ್ಯೆ ಭೀಕರ ಅಪಘಾತ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಓಮ್ನಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ಕಳ ಗೋಮಟೇಶ್ವರ ಬೆಟ್ಟ ಬಳಿ ಇಂದು ಈ ದುರ್ಘಟನೆ ನಡೆದಿದೆ.


ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಮಧ್ಯೆ ಡಿಕ್ಕಿಯಾಗಿದೆ. ಇದರ ಪರಿಣಾಮ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಡೆ ಲಾಕ್‌ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗಿಲ್ಲ. ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್‌ ಓಪನ್‌ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್‌ ಕಟರ್‌ ಮೂಲಕ ಡೋರ್‌ ಓಪನ್‌ ಮಾಡಿ, ಬಳಿಕ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.


ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್‌ (35) ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!