ಜನ ಮನದ ನಾಡಿ ಮಿಡಿತ

Advertisement

ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ದಾರುಣ ಮೃತ್ಯು; ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ

ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಹಿಳೆಯು ದಾರುಣವಾಗಿ ಮೃತ್ಯುವಾದ ಹಿನ್ನೆಲೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಚೆಂಬುಗುಡ್ಡೆಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ಅಧ್ಯಕ್ಷ ನ್ಯಾಯವಾದಿ ನಿತಿನ್ ಕುತ್ತಾರ್ ಇಲ್ಲಿನ ಶಾಸಕರಾದ ಯು.ಟಿ.ಖಾದರ್ ಈ ರಸ್ತೆಯನ್ನು ಟೋಲ್ ಮುಕ್ತ ರಸ್ತೆ ಎಂದು ಜಂಭ ಕೊಚ್ಚಿಕೊಳ್ಳುತ್ತಾರೆ,ಇವತ್ತು ಇಲ್ಲಿ ಅಪಘಾತ ಸಂಭವಿಸಿ ಒಂದು ಮಹಿಳೆಯ ಪ್ರಾಣವೇ ಹೋಗಿದೆ.ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಾಗದ ಇವರು ಯಾವ ಸೀಮೆಯ ಅಭಿವೃದ್ದಿಯ ಹರಿಕಾರ ಎಂದು ಹರಿಹಾಯ್ದರು.ಇನ್ನೊಂದು ವಾರದಲ್ಲಿ ಈ ರಸ್ತೆಯನ್ನು ಸರಿಪಡಿಸದೇ ಇದ್ದಲ್ಲಿ ಶಾಸಕರ ಕಛೇರಿಗೆ ತೆರಳಿ ಕಪ್ಪು ಬಾವುಟ ಹಿಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಮಾತನಾಡಿ ಸುಂದರವಾಗಿದ್ದ ತೊಕ್ಕೊಟ್ಟು ಪೇಟೆಯನ್ನು ಹಾಳು ಮಾಡಿದ್ದಾರೆ. ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ದಾಟಲು ಪರದಾಡುತ್ತಿದ್ದಾರೆ.ರಸ್ತೆಗಳೆಲ್ಲವೂ ಮರಣ ಗುಂಡಿಗಳಾಗಿವೆ ಎಂದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ಉಪಾಧ್ಯಕ್ಷರಾದ ರಝಾಕ್ ಮುಡಿಪು,ಅಶ್ರಫ್ ಹರೇಕಳ ಕೋಶಾಧಿಕಾರಿ ಅಶ್ಫಾಕ್ ಅಲೇಕಳ,ಮುಖಂಡರಾದ ರಝಾಕ್ ಮೊಂಟೆಪದವು, ವಿಕಾಸ್ ಕುತ್ತಾರ್,ಅಲ್ತಾಫ್ ಮುಡಿಪು, ಸಿರಾಜ್ ಮೊಂಟೆಪದವು, ಅಕ್ಷಿತ್ ಕುತ್ತಾರ್, ಇಕ್ಬಾಲ್ ಹರೇಕಳ,ಹೈದರ್ ಆಲಡ್ಕ, ಬಶೀರ್ ಲಚ್ಚಿಲ್,ನೌಫಲ್ ಅಲೇಕಳ,ಸರ್ಫರಾಜ್ ಗಂಡಿ,ಅನ್ಸಾರ್ ಖಂಡಿಗ, ಶಾಫಿ ಮುಡಿಪು, ದಿವ್ಯರಾಜ್ ಕುತ್ತಾರ್, ರಫೀಕ್ ಹರೇಕಳ, ಇಬ್ರಾಹಿಂ ಮದಕ ಉಪಸ್ಥಿತರಿದ್ದರು.ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ ಸ್ವಾಗತಿಸಿ ವಂದಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!