ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ನವೆಂಬರ್ 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ”; ಆಮಂತ್ರಣ ಪತ್ರ ಬಿಡುಗಡೆ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಾಜೀ ಸಚಿವ ಅಭಯ ಚಂದ್ರ ಜೈನ್ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸ ಹಾಗೂ ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಾರ್ಯನಿರ್ವಾಹಣಾಧಿಕಾರಿ ಶ್ವೇತಾ ಪಳ್ಳಿ, ಅಕೌಂಟೆಂಟ್ ಶಿವಶಂಕರ್, ಲಕ್ಷದೀಪೋತ್ಸವ ಸಮಿತಿಯ ಪದಾಧಿಕಾರಿಗಳಾದ ಸುನಿಲ್ ಆಳ್ವ ,ಮಹೀಮ್ ಹೆಗ್ಡೆ, ಕೃಷ್ಣರಾಜ ಬಪ್ಪನಾಡು, ಪುರುಷೋತ್ತಮ ಬಡಗುಹಿತ್ಲು, ಚಿರಾಗ್ ಬಪ್ಪನಾಡು, ಗಿರೀಶ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.
ಲಕ್ಷದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಬೆಳಿಗ್ಗೆ ಲಕ್ಷ ಕುಂಕುಮಾರ್ಚನೆ, ಸಂಜೆ 4 ಗಂಟೆಗೆ ಸಾರ್ವಜನಿಕ ಶನಿಪೂಜೆ, ರಾತ್ರಿ 8 ಗಂಟೆಗೆ ಲಕ್ಷದೀಪ ಬಲಿ ಉತ್ಸವ, ಅಷ್ಟಾವಧಾನ ಸೇವೆ ನಡೆಯಲಿದ್ದು ಬಳಿಕ ಸಾರ್ವಜನಿಕ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಇದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!