ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ‘ಗೃಹಲಕ್ಷ್ಮಿ’ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ ಪತ್ನಿ!

ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ.

ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂರಿಗಾಗಿ ಸ್ಕೂಟರ್ ಖರೀದಿಸಿದ್ದಾರೆ.ವೃತ್ತಿಯಲ್ಲಿ ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ರಿಯಾರ ಗೃಹಲಕ್ಷ್ಮಿ ಹಣ ಅನುಕೂಲ ಕಲ್ಪಿಸಿದೆ.

ಆರ್ಥಿಕ ನೆರವು ಗೃಹಲಕ್ಷ್ಮಿ!

ತನ್ನ ಸ್ಕೂಟರ್ ನಲ್ಲಿ ಸಲೀಂ ‘ಆರ್ಥಿಕ ನೆರವು ಗೃಹಲಕ್ಷ್ಮಿ’ ಎಂಬ ಭಿತ್ತಿಪತ್ರ ಅಂಟಿಸಿದ್ದು, ಅದರಲ್ಲಿ ಸಿದ್ದರಾಮಯ್ಯ, ಡಿ ಕೆ ಶಿವಕುಮರ್, ಲಕ್ಣ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಅಶೋಕ್ ಕುಮಾರ್ ರೈಯವರ ಫೊಟೋ ಹಾಕಿದ್ದಾರೆ.
ಶಾಸಕರಿಂದ ಸನ್ಮಾನ

ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್ ನೊಂದಿಗೆ ಶಾಸಕರನ್ನು ಭೇಟಿಯಾಗಿ ಸರಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹೇಳಿದ್ದಾರೆ. ತನಗೆ ಕೆಲಸಕ್ಕೆ ತೆರಳಲು ಈ ವಾಹನ ನೆರವಾಗಲಿದೆ. ಸರಕಾರಕ್ಕೆ ಹಾಗೂ ಶಾಸಕರಿಗೆ ಸಲೀಂ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!