ಜನ ಮನದ ನಾಡಿ ಮಿಡಿತ

Advertisement

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಚಿವ ಜಮೀರ್‌ ಅಹ್ಮದ್‌ ಖಾನ್‌  ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರು ಸೂಚನೆ ನೀಡಿದ್ದಾರೆ.

ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.  ಕಳೆದ ಸೆಪ್ಟೆಂಬರ್‌ 24ರಂದು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಕ್ರಮ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿತ್ತು.
ಕಳೆದ ಸೆಪ್ಟೆಂಬರ್‌ 25ರಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಜಮೀರ್‌ ʻನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಮರುದಿನ ತಮ್ಮ ಹೇಳಿಕೆ ಕುರಿತು ಕ್ಷಮೆ ಕೋರಿದ್ದರು.  ಜಮೀರ್‌ ಅವರ ಈ ಹೇಳಿಕೆ ಖಂಡಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ನ್ಯಾಯಾಂಗ ನಿಂದನೆಯ ಜೊತೆಗೆ ಸಚಿವ ಜಮೀರ್ ಅಹಮದ್ ವಿರುದ್ಧ ಕ್ರಿಮಿನಲ್ ಪ್ರೊಸಿಡಿಂಗ್‌ಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ಅಡ್ವೋಕೇಟ್ ಜನರಲ್‌ಗೆ ಪತ್ರ ಬರೆದಿರುವ ರಾಜ್ಯಪಾಲರು ಸಚಿವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!