ಜನ ಮನದ ನಾಡಿ ಮಿಡಿತ

Advertisement

ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಮಿಸ್..!!

ಬಂಟ್ವಾಳ: ಮದುವೆಗೆಂದು ಬಂದ ಬಾಲಕಿಯೋರ್ವಳ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ಕಳೆದುಹೋದ ಘಟನೆ ನಡೆದಿದೆ.

ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ನ.10 ರಂದು ನಡೆದ ಮದುವೆ ಕಾರ್ಯಕ್ರಮದಲ್ಲಿ ಮಗುವಿನ ಕುತ್ತಿಗೆಯಿಂದ ಬಂಗಾರದ ಚೈನ್ ಮಿಸ್ ಆಗಿದೆ.ಚೈನ್ ಕಳೆದುಕೊಂಡ ಬಾಲಕಿಯ ಹೆತ್ತವರು ಬಂಟ್ವಾಳ ‌ಪೋಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಹಾಜರಾದ ಪೋಲೀಸರು ಇಲ್ಲಿನ ಮ್ಯಾನೇಜರ್ ಬಳಿ ಸಿ‌ಸಿ‌ಕ್ಯಾಮರ ದ ಪೂಟೇಜ್ ಗಾಗಿ ಕೇಳಿದಾಗ ಸಭಾಂಗಣದಲ್ಲಿ ಕ್ಯಾಮರಾ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಈ ವೇಳೆ ಮದುವೆಗೆ ಆಗಮಿಸಿದ ಬಾಲಕಿಯ ಸಂಬಂಧಿಕರು , ಪೋಷಕರು ಮತ್ತು ಮ್ಯಾನೇಜರ್ ನಡುವೆ ಕೆಲ ಹೊತ್ತು ಮಾತಿನ ಚಕಮಕಿ ಕೂಡ ನಡೆದಿದೆ ಎನ್ನಲಾಗಿದೆ.ಬಂಗಾರ ಕಳೆದುಹೋಗಿದೆಯಾ? ಅಥವಾ ಕಳ್ಳರು ಕಳ್ಳತನ ಮಾಡಿದ್ದಾರಾ? ಎಂಬುದು ಇಲ್ಲಿ ಅಸ್ಪಷ್ಟವಾಗಿದೆ. ಈ ಘಟನೆಯ ಬಗ್ಗೆ ಕೂಲಂಕಷವಾಗಿ ತಿಳಿದುಕೊಳ್ಳಲು ಸಿ.ಸಿ.ಕ್ಯಾಮರಾ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ಅಷ್ಟಕ್ಕೂ ಚಿನ್ನ ಕಳೆದುಕೊಂಡ ಬಾಲಕಿಯ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ವಿನಹಃ ದೂರು ನೀಡಲು ಅವರು ಮುಂದಾಗಿಲ್ಲ ಎಂದು ನಗರ ಠಾಣಾ ಪೋಲೀಸರು ಮಾಹಿತಿ ನೀಡಿದ್ದರೆ.
ಆದರೆ ನಗರ ಠಾಣಾ ಪೋಲೀಸರು ಮಾತ್ರ ನೂತನ ತಂತ್ರಜ್ಞಾನದ ಮೂಲಕ ಇಲ್ಲಿ ಚಿನ್ನ ಕಳೆದುಹೋಗಿರುವ ವಿಚಾರವನ್ನು ನಮೂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಭಾಂಗಣದಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನಗಳು ನಡೆಯುವು ಅತಿಯಾಗಿರುವ ಕಾರಣಕ್ಕಾಗಿ ಎಲ್ಲಾ ಮದುವೆ ಮಂಟಪಗಳಲ್ಲಿಯೂ ಸಿ.ಸಿ.ಕ್ಯಾಮರಾ ಅಳವಡಿಸಿ ಎಂದು ಪೋಲೀಸ್ ಇಲಾಖೆ ಅತ್ಯಂತ ಕಠಿಣವಾಗಿ ಅದೇಶ ನೀಡಿದೆಯಾದರೂ ಇಲ್ಲಿನ ಮಂಟಪದಲ್ಲಿ ಯಾಕೆ ಸಿ.ಸಿ.ಕ್ಯಾಮರಾ ಅಳವಡಿಸಲಾಗಿಲ್ಲ ಎಂಬ ಪ್ರಶ್ನೆಯನ್ನು ಚಿನ್ನ ಕಳೆದುಕೊಂಡವರ ಸಂಬಂಧಿಕರು ಮಾಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!