ಜನ ಮನದ ನಾಡಿ ಮಿಡಿತ

Advertisement

ಈಶ್ವರಮಂಗಲ: ಪ್ರವಾದಿ ನಿಂದನಾತ್ಮಕ ಭಿತ್ತಿಪತ್ರ ಪ್ರಕರಣ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಿರುವ ಆರೋಪಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಮತ್ತು ಆರೋಪಿಗಳನ್ನು ಬಂಧಿಸಿ ಶಾಂತಿ ಕಾಪಾಡುವಂತೆ ಈಶ್ವರಮಂಗಲ ಮುಸ್ಲಿಂ ಒಕ್ಕೂಟದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಲಾಯಿತು‌.


ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ಶಾಸಕರು ಶಾಂತಿಯುತವಾಗಿರುವ ಪುತ್ತೂರಿನಲ್ಲಿ ಏನಾದರೂ‌ಮಾಡಿ ಗಲಭೆ ಎಬ್ಬಿಸಬೇಕು ಎಂಬ ಉದ್ದೇಶದಿಂದ ಕೆಲವೊಂದು ಕಿಡಿಗೇಡಿಗಳು ಧಾರ್ಮಿಕ ಮಹಾನ್ ವ್ಯಕ್ತಿಗಳಿಗೆ ನಿಂದನೆ ಮಾಡುವ ಕೃತ್ಯಕ್ಕೆ ಕೈ ಹಾಕಿದ್ದಾರೆ. ಇಂಥವರಿಗೆ ತಕ್ಕ ಶಾಸ್ತಿಯಾಗಬೇಕು, ಪೊಲೀಸ್ ಇಲಾಖೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಧರ್ಮದ ವಿಚಾರದಲ್ಲಿ‌ಜನರ ಭಾವನೆ ಕೆರಳಿಸುವ ಯಾರೇ ಆಗಲಿ ಬಂಧಿಸಿ‌ಮಟ್ಟ ಹಾಕಿ‌ಎಂದು ಸೂಚನೆ ನೀಡಿದರು.
ಈ‌ಸಂಧರ್ಭದಲ್ಲಿ‌ ಒಕ್ಕೂಟದ ಪ್ರಮುಖರಾದ ಮಹಮ್ಮದ್ ಬಡಗನ್ನೂರು, ಮೂಸಾನ್ ಕರ್ನೂರು,ಅಬ್ದುಲ್ ರಹಿಮಾನ್ ಮೇನಾಲ,ಸಿ ಎ ಅಬೂಬಕ್ಕರ್,ಇಬ್ರಾಹಿಂ ,ಕೆ ಎಂ ಮಹಮ್ಮದ್, ಮಹಮ್ಮದ್‌ಕುಂಞಿ‌ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!