ಜನ ಮನದ ನಾಡಿ ಮಿಡಿತ

Advertisement

ಹಿರಿಯಡಕ, ಕುದಿ ವಸಂತ ಶೆಟ್ಟಿಯವರು ವಿಧಿವಶರಾಗಿದ್ದು,ಚೇತನವನ್ನು ಸ್ಮರಿಸಿ, ಸಂತಾಪ ಸೂಚಕ ಸಭೆ

ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ ನಿವೃತ್ತ ಮುಖ್ಯೋಪಾಧ್ಯಾಯ,ಪ್ರಖರ ವಾಗ್ಮಿ, ಚಲಿಸುವ ಜ್ಞಾನ ಕೋಶ. ಹಿರಿಯಡಕ, ಕುದಿ ವಸಂತ ಶೆಟ್ಟಿಯವರು ನವೆಂಬರ್ 11 ರಂದು ವಿಧಿವಶರಾಗಿದ್ದು, ಅಗಲಿದ ದಿವ್ಯ ಚೇತನವನ್ನು ಸ್ಮರಿಸಿ, ಸಂತಾಪ ಸೂಚಕ ಸಭೆಯು ನ.13 ಬುಧವಾರ, ಹಿರಿಯಡಕ ಬಂಟರ ಸಂಘ (ರಿ.) ಹಿರಿಯಡಕ ಇದರ ಅಧ್ಯಕ್ಷರಾದ ಶ್ರೀ ನಿತೀಶ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹಿರಿಯಡಕ ಸುರಭಿ ಸಭಾಭವನದಲ್ಲಿ ನಡೆಯಿತು.

 


ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ರೈಯವರು ಮಾತನಾಡಿ ನಮ್ಮ ಸಂಘದ ಹಿರಿಯ ಮಾರ್ಗದರ್ಶಕರು, ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ವ್ಯಕ್ತಿ, ಕುದಿ ವಿಷ್ಣುಮೂರ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ವ್ರತ್ತಿ ಜೀವನ ಆರಂಭಿಸಿ, ಸುಧೀರ್ಘ ಸೇವೆಯೊಂದಿಗೆ ಮುಖ್ಯೋಪಾಧ್ಯಾಯರಾಗಿಯೇ ವ್ರತ್ತಿಯಿಂದ ನಿವ್ರತ್ತರಾದ ಅಪರೂಪದಲ್ಲಿ ಅಪರೂಪದ ವ್ಯಕ್ತಿ.ತನ್ನ ವ್ರತ್ತಿ ಜೀವನದ ಸಾಧನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡ ಅಸಾಧಾರಣ ಸಾಧಕ. ತುಳುನಾಡ ಆಚಾರ ವಿಚಾರ, ಕಲೆ, ಸಂಸ್ಕ್ರತಿಯ ಬಗ್ಗೆ ಅಪಾರ ಜ್ಞಾನ ಹೊಂದಿದ, ಧಾರ್ಮಿಕ ವಿಚಾರಗಳಲ್ಲಿ ಅದ್ಬುತವಾಗಿ ಮಾತನಾಡಬಲ್ಲ ವಾಗ್ಮಿ. ಇಂತಾ ಅಮೂಲ್ಯ ರತ್ನವನ್ನು ನಾವು ಕಳೆದುಕೊಂಡಿದ್ದೇವೆ.ಬಹುಮುಖ ವ್ಯಕ್ತಿತ್ವದ ಸದ್ಗುಣ ಸಂಪನ್ನ, ಚಿಂತಕ,ಕುದಿ ವಸಂತ ಶೆಟ್ಟಿಯರಿಂದು ನಮ್ಮೊಂದಿಗಿಲ್ಲ ಅನ್ನುವುದನ್ನು ನಂಬಲಾಗುತ್ತಿಲ್ಲ. ಎಂದರು
ಹಿರಿಯಡಕ ಬಂಟರ ಸಂಘದ ಅಧ್ಯಕ್ಷರಾದ ನಿತೀಶ್ ಕೂಮಾರ್ ಶೆಟ್ಟಿಯವರು ಮಾತಾಡಿ ನಮ್ಮ ಸಂಘದ ಮಾರ್ಗದರ್ಶಕರು, ಸಂಘದ ಎಲ್ಲಾ ಚಟುವಟಿಕೆಗಳಿಗೂ ಬೆನ್ನೆಲುಬಾಗಿ ನಿಂತವರು ಸಮಸ್ಯೆಗಳನ್ನು ನಯವಾಗಿ ಬಗೆಹರಿಸಿ ಎಲ್ಲರನ್ನೂ ಪ್ರೀತಿಯಿಂದ ಕಂಡ ಅದಮ್ಯ ಚೇತನ, ಎಲ್ಲದಕ್ಕೂ ಆದಾರವಾಗಿದ್ದ ಆ ಮೇರು ವ್ಯಕ್ತಿತ್ವ ಇನ್ನು ನೆನಪು ಮಾತ್ರಾ ಎನ್ನುತ್ತಾ ಭಾವುಕರಾದರು.
ಇನ್ನೂ ಅನೇಕರು ಮಾತಾಡಿದರು ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಸದ್ಗತಿಯನ್ನು, ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ
ವೇದಿಕೆಯಲ್ಲಿದ್ದ ಗಣ್ಯರೆಲ್ಲರೂ ಕುದಿ ವಸಂತ ಶೆಟ್ಟಿಯವರ ಜೊತೆ ಕಳೆದ ಅಮೂಲ್ಯ ದಿನಗಳನ್ನು ನೆನೆದು ಕಂಬನಿ ತುಂಬಿ ಸಂತಾಪ ಸೂಚಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!