ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಬಾವಿಗೆ ಹಾರಿ ಆತ್ಮಹತ್ಯೆ..!

ಉಡುಪಿ: ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಟೀಚರ್ ಒಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ನಡೆದಿದೆ.


ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ ಸೌಮ್ಯ (40) ಆತ್ಮಹತ್ಯೆ ಮಾಡಿಕೊಂಡವರು. ಇವರು ಇಂದು ಬೆಳಿಗ್ಗೆ ಮಿಯ್ಯಾರಿನ ತನ್ನ ಮನೆಯ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ಮಿಯ್ಯಾರು ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದರು.
ಸೌಮ್ಯ ಅವರ ಪತಿ ಸಂತೋಷ್‌ ಪೂಜಾರಿ ಅವರು ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಸೌಮ್ಯ ಅವರು ತೀವ್ರ ಮನನೊಂದಿದ್ದು, ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!