ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಬಸ್‌…!

ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಬಸ್‌‌ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್‌ ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತ್ತಿತ್ತು.

ಮಧುರ ಇಂಟರ್ ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್‌ ಸುಳ್ಯದಿಂದ ಪರ್ಲ೦ಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ ಅಮ್ಮಿನಡ್ಕ ಬಳಿ ಪರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮದುವೆ ಬಸ್‌ ಬಂದಿದ್ದು ಅದರ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಬಸ್‌‌ನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಮದುವೆ ಬಸ್‌‌ನ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದರಿಂದ ದೊಡ್ಡ, ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

error: Content is protected !!