ಜನ ಮನದ ನಾಡಿ ಮಿಡಿತ

Advertisement

ಶಾಲಾ ಮಕ್ಕಳಿಗೆ ಮಕ್ಕಳಿಗೆ ಜಲ ಸಂರಕ್ಷಣೆ ಮತ್ತು ನೈರ್ಮಲ್ಯ ಬಗ್ಗೆ ಜಾಗೃತಿ

ಹುಣಸೂರು: ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮಕ್ಕಳಿಗೆ ಜಲ ಸಂರಕ್ಷಣೆ ಜಾಗೃತಿ ಮತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.

 


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಶ್ರೀ ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!