ಜನ ಮನದ ನಾಡಿ ಮಿಡಿತ

Advertisement

ಜಲ ಸಂರಕ್ಷಣೆಗೆ ಮಕ್ಕಳು ಮುಂದಾಗಬೇಕು; ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಚೇತನ್

ಜಿಲ್ಲಾ ಪಂಚಾಯಿತಿ ಮೈಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು, ಉಪ ವಿಭಾಗ ಕೆಆರ್ ನಗರ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿ ಮಕ್ಕಳಿಗೆ ಜಲ ಸಾಕ್ಷರತೆಯನ್ನು ಮೂಡಿಸುವ ಸಲುವಾಗಿ ನೀರು ಮತ್ತೆ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.


ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಲ ಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ  ಚೇತನ್ ಕುಮಾರ್ ರವರು ಮುಂದಿನ ಪೀಳಿಗೆಗೆ ಶುದ್ಧ ಸುರಕ್ಷಿತ ನೀರನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮ ಎಲ್ಲರ ಮೇಲಿದೆ ಆದ್ದರಿಂದ ನಾವುಗಳು ನಮ್ಮ ಮನೆಗಳಲ್ಲಿ ನೀರನ್ನು ಅತಿ ಹೆಚ್ಚು ಪೋಲು ಮಾಡಬಾರದು ಹಾಗೂ ನೀರಿನ ಮೂಲಗಳ ಸುತ್ತ ತಿಪ್ಪೆ ಗುಂಡಿಗಳನ್ನು ಹಾಕಬಾರದು ಇದರ ಬಗ್ಗೆ ನಿಮ್ಮ ಪೋಷಕರಿಗೆ ನೀವುಗಳು ಮನವರಿಕೆ ಮಾಡಿಕೊಡಬೇಕು, ನೀವುಗಳು ಶಾಲಾ ಹಂತದಲ್ಲೇ ನೀರಿನ ಸಂರಕ್ಷಣೆ, ವೈಯಕ್ತಿಕ ಸ್ವಚ್ಛತೆ, ಹಾಗೂ ಪರಿಸರ ಸಂರಕ್ಷಣೆಯ ಕಡೆ ಹೆಚ್ಚು ಗಮನಹರಿಸಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಕಂಕಣ ಬುದ್ಧರಾಗಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಿಪ್ಪೂರು ಗ್ರಾಮ ಪಂಚಾಯಿತಿ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಶ್ರೀ ಸತ್ಯನಾರಾಯಣ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶ್ರೀಮತಿ ಮಂಗಳ, ತಾಂತ್ರಿಕ ಸಮಾಲೋಚಕರಾದ ಯಶವಂತ್, ISA ಜಿಲ್ಲಾ ತಂಡದ ನಾಯಕರಾದ ಮಹೇಶ್ ಎಚ್ ಪಿ, ಶಾಲ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಜಾತ, SDMC ಅಧ್ಯಕ್ಷರಾದ ಕೃಷ್ಣೇಗೌಡ , ತಾಲ್ಲೂಕು ಸಂಯೋಜಕರಾದ ಸುನಿಲ್ ಕುಮಾರ್ ಹಾಗೂ ಭಗೀರಥ ಸಂಸ್ಥೆಯ ನಾಗೇಶ್ ಹಾಜರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!