ಜನ ಮನದ ನಾಡಿ ಮಿಡಿತ

Advertisement

ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡ ವ್ಯಾಪಾರಿಗಳು

ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.

ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.

ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!