ಜನ ಮನದ ನಾಡಿ ಮಿಡಿತ

Advertisement

ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡ ವ್ಯಾಪಾರಿಗಳು

ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.

ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.

ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!