ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಿದ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ, ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!