ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಹಾಳಾದ ಬೀಡಿ ಎಲೆ ವಿತರಣೆ: ಬೀಡಿ ಕಾರ್ಮಿಕರಿಂದ ಪ್ರತಿಭಟನೆ, ಕಂಪೆನಿಗೆ ಮುತ್ತಿಗೆ

ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.


ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು, ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೂ ಎಚ್ಚೆತ್ತುಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ಈ ವೇಳೆ ಸಮಜಾಯಿಷಿ ನೀಡಿದ ಕಂಪನಿಯ ಮ್ಯಾನೇಜರ್ , ಹಳೇ ಬೀಡಿ ಎಲೆ ಖಾಲಿ ಮಾಡಿದ್ದು ಈಗ ಹೊಸ ಎಲೆ ಪೂರೈಕೆಯಾಗಿದೆ. ಎರಡು ದಿನಗಳಲ್ಲಿ ಹೊಸ ಎಲೆಯನ್ನು ಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ಗೋಡೌನ್ ಗೆ ಹೋಗಿ ಪರಿಶಿಲಿಸಿದರು.ಬಳಿಕ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!