ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಹಾಳಾದ ಬೀಡಿ ಎಲೆ ವಿತರಣೆ: ಬೀಡಿ ಕಾರ್ಮಿಕರಿಂದ ಪ್ರತಿಭಟನೆ, ಕಂಪೆನಿಗೆ ಮುತ್ತಿಗೆ

ಉಡುಪಿ: ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಇಂದು ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿ ಕಂಪನಿಗೆ ಮುತ್ತಿಗೆ ಹಾಕಲಾಯಿತು.


ಹಲವು ಸಮಯದಿಂದ ಬೀಡಿ ಎಲೆ ಹಾಳಾಗಿದ್ದು, ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೂ ಎಚ್ಚೆತ್ತುಕೊಳ್ಳದ ಕಂಪನಿಯ ವಿರುದ್ಧ ಇಂದು ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಕಂಪನಿಗೆ ಮುತ್ತಿಗೆ ಹಾಕಲಾಯಿತು.
ಈ ವೇಳೆ ಸಮಜಾಯಿಷಿ ನೀಡಿದ ಕಂಪನಿಯ ಮ್ಯಾನೇಜರ್ , ಹಳೇ ಬೀಡಿ ಎಲೆ ಖಾಲಿ ಮಾಡಿದ್ದು ಈಗ ಹೊಸ ಎಲೆ ಪೂರೈಕೆಯಾಗಿದೆ. ಎರಡು ದಿನಗಳಲ್ಲಿ ಹೊಸ ಎಲೆಯನ್ನು ಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ಗೋಡೌನ್ ಗೆ ಹೋಗಿ ಪರಿಶಿಲಿಸಿದರು.ಬಳಿಕ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷ ರಾದ ಬಲ್ಕೀಸ್,ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!