ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ ರಿಕ್ಷಾ ಅಪಘಾತ ; ಕುಂಬಳೆ ನಿವಾಸಿ ವ್ಯಕ್ತಿ ಮೃತ್ಯು..!

ಉಳ್ಳಾಲ: ರಿಕ್ಷಾ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ  ಸಂಭವಿಸಿದೆ.

ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತರು. ಕುಂಬಳೆಯಿಂದ ಕೊಲ್ಯ ಅಡ್ಕ ಸಮೀಪ ನಡೆದಿದ್ದ ಸಂಬಂಧಿಕರ ಹುಟ್ಟುಹಬ್ಬ ಸಮಾರಂಭಕ್ಕೆ ಖಾಸಗಿ ರಿಕ್ಷಾದಲ್ಲಿ ಆಗಮಿಸಿದ್ದ ಅವರು ಅಲ್ಲಿಂದ ಸಂಬಂಧಿಕರನ್ನು ಕೊಣಾಜೆ ಕಲ್ಕಾರ್ ಎಂಬಲ್ಲಿಗೆ ಬಿಟ್ಟು ಬರಲು ರಿಕ್ಷಾದಲ್ಲೇ ತೆರಳಿದ್ದರು. ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ
ರಿಕ್ಷಾ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!