ಜನ ಮನದ ನಾಡಿ ಮಿಡಿತ

Advertisement

ಶಿರಾಡಿ: ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ; ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.


ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!