ಜನ ಮನದ ನಾಡಿ ಮಿಡಿತ

Advertisement

‘ಅಮರ್ಥ’ ಕನ್ನಡ ಚಿತ್ರಕ್ಕೆ ಸಸಿಹಿತ್ಲು ಭಗವತಿ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ; ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಖ್ಯಾತ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ

ಕರಾವಳಿ ಮೂಲದ ಸಾಕಷ್ಟು ಕಲಾವಿದರು ಸಿನೆಮಾ ರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಪಡೆದು ಜಗತ್ತಿನ ಗಮನ ಸೆಳೆದಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಇದೀಗ ಮಂಗಳೂರು ಮೂಲದ ಮತ್ತೊಂದು ಪ್ರತಿಭಾವಂತರ ತಂಡ ಹೊಸ ಚಿತ್ರಕ್ಕೆ ಕೈಹಾಕಿದೆ. ಪಂಚರಂಗಿ ಫಿಲಂಸ್ ರವರ “ಅಮರ್ಥ” ನೂತನ ಕನ್ನಡ ಚಿತ್ರದ ಸ್ಕ್ರಿಪ್ಟ್ ಪೂಜೆ ಇಂದು ಸಹಿಹಿತ್ಲು ಭಗವತಿ ಕ್ಷೇತ್ರದಲ್ಲಿ ನಡೆಯಿತು. ಚಿತ್ರದ ನಿರ್ಮಾಪಕ ಕನ್ಯಾನ ಸದಾಶಿವ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಖ್ಯಾತ ನಟ, ವಿಮರ್ಷಕ ತಮ್ಮಣ್ಣ ಶೆಟ್ಟಿ ಕ್ಲಾಪ್ ಮಾಡಿ ಶುಭಹಾರೈಸಿದರು.ಬಳಿಕ ನಡೆದ ಸರಳ ಸಮಾರಂಭದಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡುತ್ತಾ, ಸಾಮಾಜಿಕವಾಗಿ ವಿವಿಧ ಕ್ಷೇತ್ರದಲ್ಲಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಇದೀಗ ಸಿನೆಮಾ ರಂಗದಲ್ಲಿ ಕೈ ಹಾಕುವ ಪ್ರಯತ್ನ ಮಾಡುತ್ತಿದ್ದೇನೆ. ಸಿನೆಮಾವನ್ನು ಯಶಸ್ವಿಗೊಳಿಸುವುದು ಎಲ್ಲರ ಕೈಯ್ಯಲಿದೆ ಎಂದ ಅವರು, ಚಿತ್ರತಂಡಕ್ಕೆ ಶುಭ ಹಾರೈಸಿದರು..ಚಿತ್ರದ ನಿರ್ಮಾಪಕರು, ಚಿತ್ರತಂಡದಲ್ಲಿರುವ ಹೆಚ್ಚಿನವರು ನನ್ನ ಆತ್ಮೀಯರು. ಹೀಗಾಗಿ ನನಗೆ ಈ ಸಿನೆಮಾದ ಬಗ್ಗೆ ಹೆಚ್ಚು ಆಸಕ್ತಿ. ‘ಅಮರ್ಥ’ ಸಿನೆಮಾ ಕನ್ನಡ ಚಿತ್ರರಂಗದ ಸಮರ್ಥ ಚಿತ್ರವಾಗಲಿ ಎಂದು ಈ ವೇಳೆ ನಟ ಶಿವಧ್ವಜ್ ಶುಭ ಹಾರೈಸಿದರು.ಧಾರಾವಾಹಿ ಕಲಾವಿದ ಗುರುರಾಜ್ ಹೆಗಡೆಯವರು ಈ ಸಿನೆಮಾದ ನಿರ್ಮಾಪಕರಲ್ಲಿ ಒಬ್ಬರಾಗಿದ್ದು, ಚಿತ್ರಕಥೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರಾಸ್ಥಾವಿಕ ಮಾತುಗಳನ್ನು ಆಡಿದರು..ನಿರ್ದೇಶಕ ವಿನಯ್ ಪ್ರೀತಂ, ಸಿನೆಮಾದ ಕಲಾವಿದರು, ತಂತ್ರಜ್ಞರು, ದೇವಸ್ಥಾನದ ಆಡಳಿತ ಮಂಡಳಿಯವರು, ಸಿನೆಮಾ ಪ್ರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!