ಜನ ಮನದ ನಾಡಿ ಮಿಡಿತ

Advertisement

ಸರಪಾಡಿ‌ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು ನಿಧನ

ಬಂಟ್ವಾಳ: ಸರಪಾಡಿ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ, ಸರಪಾಡಿ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು(೮೯) ಅವರು ನ. ೨೭ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.


ಪ್ರಗತಿಪರ ಕೃಷಿಕರಾಗಿದ್ದ ನಾರಾಯಣ ಆಳ್ವ ಅವರು ಸುದೀರ್ಘ ಸಮಯ ಸಕ್ರೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದು, ಬಿ.ರಮಾನಾಥ ರೈ ಅವರ ಆಪ್ತರಾಗಿದ್ದರು.
ಸರಪಾಡಿ ಮಂಡಲ ಪಂಚಾಯತ್ ನಲ್ಲಿ ಸುದೀರ್ಘ ೨೫ ವರ್ಷಗಳ ಕಾಲ‌ ಅಧ್ಯಕ್ಷರಾಗಿ, ಮಣಿನಾಲ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸರಪಾಡಿ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸರಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪನೆಗೆ ಕಾರಣರಾಗಿ ಸ್ಥಾಪಕಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸರಳ- ಸಜ್ಜನಿಕೆಯ ವ್ಯಕ್ತಿತ್ವದೊಂದಿಗೆ ಜನಾನುರಾಗಿಯಾಗಿದ್ದರು. ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಮಣಿನಾಲ್ಕೂರು ಸಿಎ ಬ್ಯಾಂಕ್ ಸಿಇಒ ಸುಧಾಕರ ಶೆಟ್ಟಿ ಹೆಗ್ಗಡೆಕೋಡಿ ಸೇರಿದಂತೆ ಹಲವು ಗಣ್ಯರು ಮೃತರ‌ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!