ಜನ ಮನದ ನಾಡಿ ಮಿಡಿತ

Advertisement

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್ ನ ಹತ್ಯೆಯನ್ನು ಹೋಲಿಸುವ ಇನ್ನೊಂದು ಕೃತ್ಯಕ್ಕೆ ಆರೋಪಿ ನರೇಶ್ ಭೇಂಗ್ರ ಕಾರಣನಾಗಿದ್ದಾನೆ.


ನರೇಶ್ ಮತ್ತು ಹತ್ಯೆಯಾದ ಗಂಗಿ ಮೂಲತಃ ಝಾರ್ಖಂಡ್ ನಿವಾಸಿಗಳಾಗಿದ್ದು, ಎರಡು ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಾಗಿದ್ದರು. ನರೇಶ್ ಈ ನಡುವೆ ಝಾರ್ಖಂಡ್ ನಲ್ಲಿ ಮದುವೆಯಾಗಿದ್ದು, ಪತ್ನಿಯನ್ನು ಊರಿನಲ್ಲಿ ಬಿಟ್ಟು ಬಂದು ಗಂಗಿಯೊಂದಿಗೆ ವಾಸವಾಗಿದ್ದ. ಎರಡು ವಾರಗಳ ಹಿಂದೆ ಇಬ್ಬರು ಊರಿಗೆ ಮರಳಿದ್ದಾರೆ. ಈ ವೇಳೆ ಗಂಗಿ ಆತನ ಮನೆಗೆ ಕರೆದುಕೊಂಡು ಹೋಗಲು ಒತ್ತಾಯಿಸಿದ್ದಾಳೆ. ತನ್ನ ಮದುವೆಯ ವಿಷಯ ತಿಳಿಯುವ ಭಯದಲ್ಲಿ ನರೇಶ್ ಆಕೆಯನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಂಡಿದ್ದಾನೆ. ನರೇಶ್ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ತನ್ನ ಕೌಶಲ್ಯ ಬಳಸಿ ಮಹಿಳೆಯ ದೇಹವನ್ನು 40ಕ್ಕೂ ಹೆಚ್ಚು ಭಾಗಗಳಾಗಿ ಕತ್ತರಿಸಿದ್ದಾನೆ.
ಘಟನೆ ನಡೆದು ಎರಡು ವಾರಗಳು ಕಳೆದಿದ್ದು, ನ. 24ರಂದು ನಾಯಿಯೊಂದು ದೇಹದ ಭಾಗವನ್ನು ಕಚ್ಚಿಕೊಂಡು ಬಂದಿರುವುದು ಗ್ರಾಮಸ್ಥರ ಗಮನಕ್ಕೆ ಬಂದಿದೆ. ಈ ವೇಳೆ ಪೊಲೀಸರು ಶೋಧಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಖುಂಟಿ ಪೊಲೀಸ್ ವರಿಷ್ಟಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!