ಜನ ಮನದ ನಾಡಿ ಮಿಡಿತ

Advertisement

ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾ*ವು..!

ಬಂಟ್ವಾಳ:ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.


ವೀರಕಂಬ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ (47) ಮೃತಪಟ್ಟವರಾಗಿದ್ದಾರೆ.ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎಂದು ಹೇಳಲಾಗಿದೆ.
ಅ ಬಳಿಕ ಇವರು ಇಲಾಖೆಯೊಳಗೆ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.
ಬೆಳಿಗ್ಗೆ ಸುಮಾರು 8.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಜಯರಾಮ ಅವರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.ಬಾಗಿಲಿನ ಚಿಲಕ ಮುರಿದು ಒಳಗೆ ಹೋಗಿ ನೋಡಿದಾಗ ಇವರು ಅದಾಗಲೇ ಮೃತಪಟ್ಟ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆಯಾದರೂ, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ,ಪರೀಕ್ಷೆ ನಡೆಸಿದಾಗ ಅವರು ಮೃತಪಟ್ಟ ಬಗ್ಗೆ ಇಲ್ಲಿನ ವೈದ್ಯರು ತಿಳಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅವರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!