ಜನ ಮನದ ನಾಡಿ ಮಿಡಿತ

Advertisement

ಚೇರ್ಕಾಡಿ: 2025ರ ಮೇಯಿಂದ ರಾಷ್ಟ್ರೋತ್ಥಾನ ಪರಿಷತ್ ನ ಸಿಬಿಎಸ್ಇ ಶಾಲೆ ಆರಂಭ

ಉಡುಪಿ: ರಾಷ್ಟ್ರೋತ್ಥಾನ ಪರಿಷತ್ ಗೆ 60 ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರ ಭಾಗವಾಗಿ ಉಡುಪಿ ಜಿಲ್ಲೆಯ ಚೇರ್ಕಾಡಿಯಲ್ಲಿ ನೂತನ ಶಾಲೆ 2025ರ ಮೇ ಯಿಂದ ಕಾರ್ಯಾರಂಭವಾಗಲಿದೆ ಎಂದು ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿ ನಾರಾವಿ ದಿನೇಶ್ ಹೆಗ್ಡೆ ಹೇಳಿದರು.


ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೋತ್ಥಾನ ಪರಿಷತ್ ನ 14 ಸಿಬಿಎಸ್ಇ ಶಾಲೆಗಳಲ್ಲಿ 15 ಸಾವಿರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಬಿಎಸ್ಇ ಶಾಲೆಗಳನ್ನು ಆರಂಭಿಸುವ ಯೋಜನೆ ಇದೆ ಎಂದರು.
ಚೇರ್ಕಾಡಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕದಿಂದ 8 ನೇ ತರಗತಿಯವರೆಗೆ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂದಿನ ವರ್ಷ ಎಪ್ರಿಲ್ 30 ರಂದು ಶಾಲಾ ಕಟ್ಟಡ ಉದ್ಘಾಟನೆಗೊಳ್ಳಲಿದ್ದು, ಮೇ ತಿಂಗಳಿನಿಂದ ಶಾಲೆ ಕಾರ್ಯಾರಂಭವಾಗಲಿದೆ. ಹುಡುಗ/ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ಥಾನೀಯ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಾರ್ಯದರ್ಶಿ ಋಷಿ ರಾಜ್, ರವಿ ಕುಮಾರ್, ಪ್ರಾಂಶುಪಾಲೆ ಭಾಗ್ಯಶ್ರೀ ಐತಾಳ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!