ಜನ ಮನದ ನಾಡಿ ಮಿಡಿತ

Advertisement

ನೈಜೀರಿಯದಲ್ಲಿ ಬೋಟ್ ಮಗುಚಿ 27ಕ್ಕೂ ಹೆಚ್ಚು ಮಂದಿ ಸಾವು, ನೂರಾರು ಮಂದಿ ನಾಪತ್ತೆ..!

ನೈಜೀರಿಯದ ಉತ್ತರ ಭಾಗದಲ್ಲಿ ಸಂಭವಿಸಿದ ಬೋಟ್ ಅಪಘಾತದಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ನೈಜೀರಿಯದ ಕೋಗಿ ರಾಜ್ಯದಿಂದ ಹೊರಟ ಬೋಟ್, ನೈಜರ್ ನದಿಯಲ್ಲಿ ಮುಳುಗಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೋಟ್‌ನಲ್ಲಿ ಸುಮಾರು 200 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ವೇಳೆಗೆ 27 ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದು, ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ.

 

ಸ್ಥಳೀಯ ಸ್ಕೂಬಾ ತಜ್ಞರು ಮತ್ತು ಸೇನಾಬಲದ ಸಿಬ್ಬಂದಿ ಸೇರಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ಕೋಗಿಯ ರಕ್ಷಣಾ ಪ್ರತಿನಿಧಿ ತಿಳಿಸಿದ್ದಾರೆ. ಘಟನೆ ಸಂಭವಿಸಿದ 12 ಗಂಟೆಗೂ ಹೆಚ್ಚಿನ ಸಮಯದಲ್ಲಿ ಯಾವುದೇ ಪ್ರಯಾಣಿಕರನ್ನು ಜೀವಿತಾವಸ್ಥೆಯಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಗಾಯಾಳುಗಳಲ್ಲಿ ಬಹುಮಟ್ಟಿಗೆ ಮಹಿಳೆಯರೇ ಇದ್ದು, ಮತ್ತು ಅವರಲ್ಲಿ ಕೆಲವರು ಮಾರ್ಕೆಟಿಗೆ ಹೋಗುತ್ತಿದ್ದವರು ಎಂದು ವರದಿಯಾಗಿದೆ.

ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿರುವುದು ಮತ್ತು ಬೋಟ್ ನಿರ್ವಹಣೆ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ. ಮುಳುಗಿದ ಬೋಟನ್ನು ಹುಡುಕಲು ತಡವಾದ ಕಾರಣ ಸಾವಿನ ಸಂಖ್ಯೆ ಹೆಚ್ಚಾಯಿತು ಎಂದು ವಿಶ್ಲೇಷಣೆ ಮಾಡಲಾಗಿದೆ.
ನೈಜೀರಿಯಾ ಭಾಗದಲ್ಲಿ ಸಮರ್ಪಕ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಜನರು ಹೆಚ್ಚಾಗಿ ಜಲ ಸಾರಿಗೆಯನ್ನು ಬಳಸುತ್ತಿದ್ದು, ಹೀಗಾಗಿ ಅಲ್ಲಿ ಬೋಟ್ ಅಪಘಾತಗಳು ಸಾಮಾನ್ಯವಾಗುತ್ತಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!