ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಪರ್ಲಡ್ಕದ ಯುವಕ ನಾಪತ್ತೆ-ಪುತ್ತೂರು ನಗರ ಠಾಣೆಯಲ್ಲಿ ದೂರು.

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್‌, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್‌ ಸಹಿತ ಆತ ನಾಪತ್ತೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಲೋಕೇಂದರ್ ಸಿಂಗ್ ತಂದೆ ರತನ್ ಸಿಂಗ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕ ಸುಮಾರು 6 ಅಡಿ ಉದ್ದ, ಗೋದಿ ಮೈಬಣ್ಣ, ಉದ್ದನೆಯ ಕೂದಲು, ಗಡ್ಡಮೀಸೆ ಹೊಂದಿದ್ದು ಕನ್ನಡಕ ಧರಿಸಿರುತ್ತಾನೆ. ಕನ್ನಡ, ಹಿಂದಿ, ಇಂಗ್ಲಿಷ್, ಮಾರ್ವಾಡಿ ಭಾಷೆ ಬಲ್ಲವನಾಗಿದ್ದು ಆತನ ಗುರುತು ಪತ್ತೆಯಾದಲ್ಲಿ ನಗರ ಠಾಣೆಗೆ ಮಾಹಿತಿ ನೀಡುಂತೆ ಪೊಲೀಸ್‌ ಠಾಣೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!