ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಪರ್ಲಡ್ಕದ ಯುವಕ ನಾಪತ್ತೆ-ಪುತ್ತೂರು ನಗರ ಠಾಣೆಯಲ್ಲಿ ದೂರು.

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು ತಿಂಗಳ ಹಿಂದೆ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ನ.30ರಂದು ಎಂದಿನಂತೆ ಮನೆಯಲ್ಲಿ ಊಟ ಮಾಡಿ ಟಿವಿ ನೋಡಿಕೊಂಡಿದ್ದ. ಬೆಳಿಗ್ಗೆ ನೋಡುವಾಗ ಆತ ಮನೆಯಲ್ಲಿಲ್ಲದೆ ನಾಪತ್ತೆಯಾಗಿದ್ದಾನೆ. ಆತನ ಉಡುಪುಗಳು ತುಂಬಿದ್ದ ಬ್ಯಾಗ್‌, ದಾಖಲೆ ಪತ್ರಗಳು ಹಾಗೂ ಪಾಸ್‌ಪೋರ್ಟ್‌ ಸಹಿತ ಆತ ನಾಪತ್ತೆಯಾಗಿದ್ದಾನೆ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಲೋಕೇಂದರ್ ಸಿಂಗ್ ತಂದೆ ರತನ್ ಸಿಂಗ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಯುವಕ ಸುಮಾರು 6 ಅಡಿ ಉದ್ದ, ಗೋದಿ ಮೈಬಣ್ಣ, ಉದ್ದನೆಯ ಕೂದಲು, ಗಡ್ಡಮೀಸೆ ಹೊಂದಿದ್ದು ಕನ್ನಡಕ ಧರಿಸಿರುತ್ತಾನೆ. ಕನ್ನಡ, ಹಿಂದಿ, ಇಂಗ್ಲಿಷ್, ಮಾರ್ವಾಡಿ ಭಾಷೆ ಬಲ್ಲವನಾಗಿದ್ದು ಆತನ ಗುರುತು ಪತ್ತೆಯಾದಲ್ಲಿ ನಗರ ಠಾಣೆಗೆ ಮಾಹಿತಿ ನೀಡುಂತೆ ಪೊಲೀಸ್‌ ಠಾಣೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!