ಜನ ಮನದ ನಾಡಿ ಮಿಡಿತ

Advertisement

ಬಿಜೆಪಿಯವರು ಉಚಿತ ಬಸ್ಸಿನಲ್ಲಿ ಹೋಗುತ್ತಾರೆ, ಬಸ್ಸಿನಿಂದಿಳಿದು ಕಾಂಗ್ರೆಸ್ಸನ್ನು ದೂರುತ್ತಾರೆ: ರಮೇಶ್ ರೈ ಸಾಂತ್ಯ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್‌ಆರ್‌ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!