ಜನ ಮನದ ನಾಡಿ ಮಿಡಿತ

Advertisement

ಬಿಜೆಪಿಯವರು ಉಚಿತ ಬಸ್ಸಿನಲ್ಲಿ ಹೋಗುತ್ತಾರೆ, ಬಸ್ಸಿನಿಂದಿಳಿದು ಕಾಂಗ್ರೆಸ್ಸನ್ನು ದೂರುತ್ತಾರೆ: ರಮೇಶ್ ರೈ ಸಾಂತ್ಯ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಾಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಉಚಿತವಾಗಿ ಸರಕಾರಿ ಬಸ್ಸಿನಲ್ಲಿ ತೆರಳುವ ಬಿಜೆಪಿಯವರು ಬಸ್ಸಿನಿಂದ ಇಳಿದು ಶಕ್ತಿ ಯೋಜನೆಯೇ ಸರಿಯಿಲ್ಲ ಇದರಿಂದ ಕೆಎಸ್‌ಆರ್‌ಟಿಸಿ ದಿವಾಳಿಯಾಗಲಿದೆ ಎಂದು ದೂಷಣೆ ಮಾಡುತ್ತಾರೆ, ದಿವಾಳಿಯಾಗುವ ಭಯ ಬಿಜೆಪಿಗರಿಗೆ ಇದ್ದಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲಿ ನಮ್ಮದೇನು ಅಭ್ಯಂಥರವಿಲ್ಲ ಎಂದು ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಹೇಳಿದರು. ಕಾವಿನಲ್ಲಿ ಸೇವಾ ಸಿಂಧು ನೋಂದಣಿ ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಐದು ಗ್ಯಾರಂಟಿಗಳನ್ನು ಬಡವರಿಗಾಗಿ ಕಾಂಗ್ರೆಸ್ ಜಾರಿಗೆ ತಂದಿದೆ. ಇಷ್ಟವಿದ್ದವರು ಪಡೆದುಕೊಳ್ಳಬಹುದು ಬೇಡವಾದವರು ಬಿಡಬಹುದು. ಯೋಜನೆಯ ಹೆಸರಿನಲ್ಲಿ ಬಡವರನ್ನು ಹಿಯಾಳಿಸುವ ಕೆಲಸವನ್ನು ಬಿಜೆಪಿ ನಿಲ್ಲಿಸಬೇಕು, ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸರಕರದ ಐದು ಗ್ಯಾರಂಟಿಯನ್ನು ಕರ್ನಾಟಕದ ಜನತೆ ಸ್ವಾಗತಿಸಿದ್ದಾರೆ. ಜನತೆಯ ಸ್ವಾಗತಕ್ಕೆ ಬಿಜೆಪಿ ಬೆಚ್ಚಿ ಬಿದ್ದಿದೆ, ಕಳೆದ ಐದು ವರ್ಷದಲ್ಲಿ ಭೃಷ್ಟ ಆಡಳಿತ ನಡೆಸಿದ ಬಿಜೆಪಿಗೆ ಈ ಬರಿ ಜನ ತಕ್ಕ ಪಾಠ ಕಲಿಸಿಯೂ ಅವರಿಗೆ ಬುದ್ದಿ ಬಂದಿಲ್ಲ ಎಂದು ಹೇಳಿದ ಅವರು ಗ್ಯಾರಂಟಿ ಯೋಜನೆ ಕಾಂಗ್ರೆಸ್ ಯೋಜನೆಯಾಗಿದೆ ನೀವು ಇಷ್ಟವಿದ್ದಲ್ಲಿ ಸ್ವೀಕರಿಸಿ ಇಲ್ಲವಾದಲ್ಲಿ ಮೌನವಾಗಿರಿ ಎಂದು ಬಿಜೆಪಿಗರಿಗೆ ಮಾತಿನ ಮೂಲಕ ತಿವಿದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!