ಜನ ಮನದ ನಾಡಿ ಮಿಡಿತ

Advertisement

ಕರಾವಳಿಯಾದ್ಯಂತ ಭಾರಿ ಮಳೆ, ತೋಡಿನಂತಾದ ರೋಡು!

ಕರಾವಳಿಯಾದ್ಯಂತ ಭಾರಿ ಮಳೆ, ತೋಡಿನಂತಾದ ರೋಡು!

ಮಂಗಳೂರು : ಫೆಂಗಾಲ್ ಚಂಡಮಾರುತ ದಕ್ಷಿಣ ಭಾರತದಾದ್ಯಂತ ಭಾರಿ ಕೋಲಾಹಲ ಸೃಷ್ಟಿಸುತ್ತಿದ್ದು, ಇದೀಗ ಪಶ್ಚಿಮ ಕರಾವಳಿಗೂ ಇದರ ಪ್ರಭಾವ ತಟ್ಟಿದೆ. ಸೋಮವಾರ ಸಂಜೆಯಿಂದ ಸುರಿದ ಭಾರಿ ಮಳೆಗೆ ಮಂಗಳೂರು, ಉಡುಪಿ, ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿ ಸೇರಿ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡೆಚಡೆಯಾಯಿತು.

ಸೋಮವಾರ ಬೆಳಗ್ಗಿನಿಂದಲೇ ಮಂಗಳೂರು ಸೇರಿ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಗಾಳಿಯ ವೇಗ ಹೆಚ್ಚಿತ್ತು. ಸಂಜೆ ೩. ೩೦ ರ ವೇಳೆಗೆ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಇನ್ನೂ ಮೂರೂ ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ದ.ಕ. , ಉಡುಪಿ, ಕಾಸರಗೋಡು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನದಿಗಳಲ್ಲೂ ನೀರಿನ ಮಟ್ಟ ಹೆಚ್ಚಾಗಿದ್ದು, ಕುಮಾರಧಾರ ನದಿಯು ಮೈದುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವವೂ ನಡೆಯುತ್ತಿದ್ದು, ತೀರ್ಥ ಸ್ನಾನಕ್ಕೆ ನದಿಗೆ ಇಳಿಯದಂತೆ ಸೂಚಿಸಲಾಗಿದೆ. ಸದ್ಯ ಜಿಲ್ಲಾದ್ಯಂತ ಅರೇಂಜ್ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಸಮಸ್ಯೆ?
ಫೆಂಗಾಲ್ ತಂದ ಮಳೆಯಿಂದಾಗಿ ಮಂಗಳೂರು ನಗರದ ಕೂಳೂರು, ಕೆ.ಪಿ..ಟಿ., ಜ್ಯೋತಿ ಸರ್ಕಲ್ ಸೇರಿ ಹಲವು ರಸ್ತೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬಜ್ಪೆ-ಅದ್ಯಪಾಡಿ ರಸ್ತೆಗೆ ವಿಮಾನ ನಿಲ್ದಾಣದ ರನ್ ವೇ ಮಣ್ಣು ಕುಸಿದ ಪರಿಣಾಮ ಸಂಪರ್ಕ ಕಡಿತವಾಗಿದೆ. ಬಂದರಿನಲ್ಲಿ ಲಂಗಾಮು ಹಾಕಿ ನಿಲ್ಲಿಸಿದ್ದ ದೋಣಿಗಳು ನೀರು ಪಾಲಾಗಿದೆ. ರಾಷ್ತ್ರೀಯ ಹೆದ್ದಾರಿ ೬೬ರ ತಲಪಾಡಿ ಬಳಿ ಹೆದ್ದಾರಿಯಲ್ಲಿ ನೀರು ನಿಂತು ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಯಿತು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!