ಜನ ಮನದ ನಾಡಿ ಮಿಡಿತ

Advertisement

ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಿಕ್ಕಿತು ಕಠಿಣ ಶಿಕ್ಷೆ

ಮಗುವಿನ ಮೇಲೆ ಅತ್ಯಾಚಾರ ಎಸಗಿದವನಿಗೆ ಸಿಕ್ಕಿತು ಕಠಿಣ ಶಿಕ್ಷೆ


ಬೆಳಗಾವಿ : ಎರಡೂವರೆ ವರ್ಷದ ಕಂದಮ್ಮನಿಗೆ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದ ವ್ಯಕ್ತಿಗೆ ಪೋಕ್ಸೋ ನ್ಯಾಯಾಲಯ ಜೀವಾವಧಿ ಶಿಕ್ಷೆಯೊಂದಿಗೆ ೩೦ ಲಕ್ಷ ದಂಡವಿಧಿಸಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರಿನ ಆರೋಪಿಯಾಗಿರುವ ಮಹಾದೇವ ನಾಯ್ಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

೨೦೧೭ರಲ್ಲಿ ಶಾಲಾ ವಠಾರದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಕೌಪಾಂಡ್ ಬಳಿ ಕರೆದುಕೊಂಡು ಹೋಗಿ ಗುಪ್ತಾನ್ಗಕ್ಕೆ ಹಾನಿಗೊಳಿಸಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಂದುಹಾಕಲು ಪ್ರಯತ್ನಿಸಿದ್ದಾನೆ. ಫಲಿಸದೇ ಇದ್ದಾಗ ಇಷ್ಟಕ್ಕೆ ಬಿಡದೇ ಮಗುವನ್ನು ಮಣ್ಣಿನಲ್ಲಿ ಹೂತು ಹಾಕಿ ಪ್ರಕರಣ ಮುಚ್ಚು ಹಾಕಲು ಯತ್ನಿಸಿದ್ದಾನೆ. ಈ ವೇಳೆ ಜನರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾನೆ. ಘಟನೆ ತಿಳಿದ ಪೋಷಕರು ನೇಸರಗಿ ಠಾಣೆಗೆ ದೂರು ನೀಡಿದ್ದಾರೆ.

      ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ. ಎಂ. ಪುಷ್ಪಲತಾರವರು ತಪ್ಪಿತಸ್ಥನಿಗೆ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸಂತ್ರಸ್ತೆಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ೧ ಲಕ್ಷ ಪರಿಹಾರ ಪಡೆಯುವಂತೆ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!