ಜನ ಮನದ ನಾಡಿ ಮಿಡಿತ

Advertisement

ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ವಿವಿಧ ಸಲಕರಣೆ ಮಂಜೂರು

ಬಂಟ್ವಾಳ: ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.


ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!